BREAKING
ಉಡುಪಿ

Dasara2026 ನಾಡಹಬ್ಬ ದಸರಾದಲ್ಲಿ ಮೊದಲ ಬಾರಿ ಕರಾವಳಿಯ ಕಂಬಳ ವೈಭವ


ಬೆಂಗಳೂರು,ಜುಲೈ 10 : ಈ ಬಾರಿಯ ನಾಡ ಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಭರ್ಜರಿ ಸಿದ್ಧತೆಯನ್ನು ಆರಂಭಿಸಲಾಗಿದೆ. ಈ ಬಾರಿಯ ಮೈಸೂರು ದಸರಾದಲ್ಲಿ ಹೊಸ ಆಕರ್ಷಣೆಯಾಗಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಆಯೋಜಿಸಲು ಸರ್ಕಾರ ತೀರ್ಮಾನಿಸಿದೆ.ಈ ಕುರಿತು ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ  ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು. ಸಚಿವರಾದ ಡಾ.ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್, ಕೆ.ವೆಂಕಟೇಶ್, ಎಚ್.ಸಿ.ಮಹದೇವಪ್ಪ ಹಾಗೂ ವಿವಿಧ ಜಿಲ್ಲೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಅಕ್ಟೋಬರ್ 18 ಮತ್ತು 19ರಂದು ಎರಡು ದಿನಗಳ ಕಾಲ ಮೈಸೂರಿನಲ್ಲಿ ಕಂಬಳ ಆಯೋಜಿಸಲು ಮತ್ತು ಇದಕ್ಕೆ ಪ್ರತ್ಯೇಕ ಅನುದಾನ ನೀಡುವಂತೆ ಕಂಬಳ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!