BREAKING
ರಾಜ್ಯ

Bengaluru ಬಿಜೆಪಿ ಹಿರಿಯ ಮುಖಂಡ ಮಾಜಿ ಸಚಿವ ರಾಮಚಂದ್ರ ಗೌಡ ನಿಧನ

ಬೆಂಗಳೂರು,ಜುಲೈ14 :ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ರಾಮಚಂದ್ರ ಗೌಡ ನಿಧನರಾಗಿದ್ದಾರೆ.ದೀರ್ಘಕಾಲದ ಅನಾರೋಗ್ಯದಿಂದ ಬಳಲಿದ್ದ ಅವರು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಖ್ಯಮಂತ್ರಿಯಾದಿಯಾಗಿ ಅನೇಕ ಗಣ್ಯರು ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದಿರುವ ರಾಮಚಂದ್ರ ಗೌಡ ಅವರು ಬಿ ಎಎಸ್ ಯಡಿಯೂರಪ್ಪ ಅವರ ಜೊತೆಯಾಗಿದ್ದರು. ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದ ಅವರು, ಬೆಂಗಳೂರು ವಿಧಾನಪರಿಷತ್ತಿಗೆ ಬೆಂಗಳೂರು ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿ, ಸಚಿವರಾಗಿ 4 ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದರು. 6 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸಚಿವರಾಗಿ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಇವರ ಸೇವೆಗೆ ರಾಜ್ಯದಾದ್ಯಂತ ಹೆಸರುವಾಸಿಯಾಗಿದ್ದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!